Sri Vishnu Sahasranama -Shloka & Artha-1| Kannada Discource | Swami Purushottamanandaji

Share it with your friends Like

Thanks! Share it with your friends!

Close

► Listen to Sri Vishnu Sahasranama -Shloka & Artha-1 Kannada Discource by Swami Purushottamanandaji in Anantha Jeevana Ganga Devotional Channel..!
——————————————
#swamipurushottamanandabhajans
#swamipurushottamanandalectures
———————————————–
Krishna Bhajans Playlist Link :https://bitly.ws/TKRc
————————————————
Album: Sri Vishnu Sahasranama -Shloka & Artha-1
Rendered By : Swami Purushottamanandaji
—————————————–
For More Updates Follow us on
Facebook : https://bit.ly/3PV6due
Twitter : https://bit.ly/3q9YYUR
Youtube : https://bit.ly/3wBUUjv
—————————————-
SUBSCRIBE TO OUR OTHER CHANNEL-
►Anantha Jeevana Ganga : https://bit.ly/38B6qjQ
———————————————-
ಸ್ವಾಮಿ ಪುರುಷೋತ್ತಮಾನಂದ (ಜೂನ್ ೧೪, ೧೯೩೧ – ಫೆಬ್ರುವರಿ ೨೫. ೨೦೦೫) ಅವರು ರಾಮಕೃಷ್ಣಾಶ್ರಮದ ಯತಿಗಳಲ್ಲೊಬ್ಬರು. ಬೆಂಗಳೂರಿನ ಬಸವನಗುಡಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಹೆಚ್ಚಿನ ಕಾಲ ಸೇವೆ ಸಲ್ಲಿಸಿದ ಅವರು ಅಮೋಘ ಶೈಲಿಯ ಗ್ರಂಥಕರ್ತರೂ, ಅದ್ಭುತ ಪ್ರವಚನಕಾರರೂ, ಅಪೂರ್ವ ಗಾಯಕರೂ ಆಗಿದ್ದರು.
ಜೂನ್ ೧೪, ೧೯೩೧ರಂದು ದಕ್ಷಿಣ ಕನ್ನಡ ಜಿಲ್ಲೆಯ ಸಾಲಿಗ್ರಾಮದ ಬಳಿಯ ಮೂಡಹಾಡು ಎಂಬಲ್ಲಿ ರಾಮಚಂದ್ರ ಬಾಯರಿ ಆಗಿ ಜನಿಸಿದ ಸ್ವಾಮೀಜಿಯವರು ಮೆಟ್ರಿಕ್ಯುಲೇಷನ್ ಮುಗಿಸಿ ಮಲ್ಪೆ ಮತ್ತು ಮಡಿಕೇರಿಗಳಲ್ಲಿ ಅಧ್ಯಾಪನ ನಡೆಸಿದರು. ಸ್ವಾಮೀಜಿ ೧೯೬೦ರ ವರ್ಷದಲ್ಲಿ ರಾಮಕೃಷ್ಣ ಪರಂಪರಗೆ ಬ್ರಹ್ಮಚಾರಿಗಳಾಗಿ ಬೆಂಗಳೂರಿನ ರಾಮಕೃಷ್ಣಾಶ್ರಮವನ್ನು ಪ್ರವೇಶಿಸಿದರು. ಅಂದಿನ ದಿನಗಳಲ್ಲಿ ಬೆಂಗಳೂರು ರಾಮಕೃಷ್ಣಾಶ್ರಮದ ಅಧ್ಯಕ್ಷರೂ, ರಾಮಕೃಷ್ಣ ಆರ್ಡರಿನ ಉಪಾಧ್ಯಕ್ಷರೂ ಆಗಿದ್ದ ಸ್ವಾಮಿ ಯತೀಶ್ವರಾನಂದರು ಅವರ ಗುರುವರ್ಯರಾದರು. ಮುಕುಂದ ಚೈತನ್ಯ ಎಂಬ ಹೆಸರಿನ ಬ್ರಹ್ಮಚಾರಿಯಾಗಿ ಸ್ವಾಮೀಜಿಯವರು ಬೇಲೂರು ಮಠದಲ್ಲಿ ಎರಡು ವರ್ಷಗಳ ತರಬೇತಿ ಪಡೆದರು.
ಆನಂತರದಲ್ಲಿ ನಡೆದದ್ದು ಸಹಸ್ರಾರು ಕರ್ನಾಟಕದ ಜನರಿಗೆ ಅಧ್ಯಾತ್ಮದ ಸಿಂಚನ . ಸ್ವಾಮಿ ಪುರುಷೋತ್ತಮಾನಂದರು ೧೯೯೩ರ ವರ್ಷದವರೆಗೆ ೩೩ ವರ್ಷಗಳ ಕಾಲ ಬೆಂಗಳೂರಿನ ರಾಮಕೃಷ್ಣಾಶ್ರಮದಲ್ಲಿದ್ದರು. ಅವರು ನಡೆಸಿದ ಚಟುವಟಿಕೆಗಳು ಅನಂತವಾದದ್ದು. ವೈವಿಧ್ಯಪೂರ್ಣವಾದದ್ದು. ವಿವೇಕಾನಂದ ಬಾಲಕ ಸಂಘ, ವಿವೇಕಾನಂದ ಯುವಕ ಸಂಘ ಮುಂತಾದ ಪ್ರಮುಖ ಸಂಯೋಜನೆಗಳ ಮೂಲಕ ಬಾಲಕರು ಮತ್ತು ಯುವಕರಿಗೆ ಅವರು ತೋರಿದ ದಾರಿದೀಪ ಮಹತ್ವಪೂರ್ಣವಾದದ್ದು. ಅಂದಿನ ದಿನಗಳಲ್ಲಿ ಪ್ರತೀ ವಾರ ಸ್ವಾಮಿ ಪುರುಷೋತ್ತಮಾನಂದರ ಪ್ರವಚನಗಳು ಎಂದೆಂದಿಗೂ ಹೌಸ್ ಫುಲ್. ಪ್ರವಚನ ಕೇಳಲಿಕ್ಕೆ ಹೋದವರಿಗೆ ಒಂದು ಭಾಷೆಯನ್ನು ಅಷ್ಟು ಸುಂದರವಾಗಿ, ಪ್ರೀತಿಪೂರ್ವಕವಾಗಿ, ಹೃದಯಪೂರ್ವಕವಾಗಿ ಅನುಭವಿಸಬಹುದು ಎಂಬುದನ್ನು ಮನದಟ್ಟು ಮಾಡಿಕೊಡುತ್ತಿದ್ದರು. ಸಾಮಾನ್ಯವಾಗಿ ಆಧ್ಯಾತ್ಮಿಕ ಪ್ರವಚನಗಳಲ್ಲಿ ಹೆಚ್ಚು ವಯಸ್ಸಾದವರು ಮಾತ್ರ ಬರುತ್ತಾರೆ ಎಂಬುದನ್ನು ಅವರ ಪ್ರವಚನಗಳು ಸುಳ್ಳು ಮಾಡಿದ್ದವು. ಅಂದಿನ ಯುವ ಪೀಳಿಗೆಯನ್ನು ಆಧ್ಯಾತ್ಮಿಕ ಪ್ರವಚನಗಳಿಗೆ ಅವರು ಸೆಳೆದ ರೀತಿ ಅಪೂರ್ವವಾದುದು. ಅವರು ಸುಶ್ರಾವ್ಯವಾಗಿ ಹಾಡುತ್ತಿದ್ದ ರೀತಿ, ಕಥಾನಕಗಳನ್ನು ವರ್ಣಿಸುತ್ತಿದ್ದ ರೀತಿ, ಅದರಲ್ಲಿದ್ದ ಪ್ರೀತಿಯ ಇನಿದನಿ, ಭಕ್ತರು ನಮಸ್ಕರಿಸುತ್ತಿದ್ದಾಗ ಅವರ ಕಣ್ಣಲ್ಲಿ ಕಣ್ಣಿಟ್ಟು ಪ್ರೀತಿಯಿಂದ ಪ್ರತಿನಮಸ್ಕರಿಸುತ್ತಾ ತೋರುತ್ತಿದ್ದ ಆತ್ಮೀಯ ಭಾವ ಇವೆಲ್ಲಾ ಜನ ಸಮುದಾಯದಲ್ಲಿ ಹೃದ್ಭಾವಗಳನ್ನು ಸೃಷ್ಟಿಸಿದ್ದವು.
೧೯೯೩ರ ವರ್ಷದಲ್ಲಿ ಸ್ವಾಮಿ ಪುರುಷೋತ್ತಮಾನಂದರು ಬೆಂಗಳೂರನ್ನು ಬಿಡಬೇಕಾಯಿತು. ಅವರಿಗೆ ಬೆಂಗಳೂರಿನ ಆಶ್ರಮ ಬಿಡುವ ಮನಸ್ಸಿರಲಿಲ್ಲ. ಸ್ವಾಮಿ ವಿವೇಕಾನಂದರು ಕೂಡಾ ಒಮ್ಮೆ ಹೇಳುತ್ತಾರೆ “ನಾನು ಮಾನವತೆಯ ಪ್ರೇಮದಿಂದ ಬಂಧಿತನಾಗಿದ್ದೇನೆ”. ಈ ಮಾತನ್ನು ಕೂಡಾ ಸ್ವಾಮಿ ಪುರುಷೋತ್ತಮಾನಂದರು ತಮ್ಮ ಪ್ರವಚನದಲ್ಲಿ ಆಗಾಗ ಹೇಳುತ್ತಿದ್ದರು. ಇದು ಸ್ವತಃ ಸ್ವಾಮಿ ಪುರುಷೋತ್ತಮಾನಂದರ ಅನುಭಾವವೂ ಆಗಿತ್ತು. ಅವರನ್ನು, ಬೆಂಗಳೂರಿನ ಆಶ್ರಮಕ್ಕೆ ಬರುತ್ತಿದ್ದ ಜನಸ್ತೋಮದ ಪ್ರೀತಿ ಅತ್ಯಂತ ಆಪ್ತವಾಗಿ ಸುತ್ತುವರಿದಿತ್ತು. ೧೯೯೩ರಿಂದ ೨೦೦೦ದ ವರ್ಷದವರೆಗೆ ಅವರು ಕೊಡಗಿನ ಪೊನ್ನಂಪೇಟೆಯ ರಾಮಕೃಷ್ಣ ಶಾರದಾಶ್ರಮದಲ್ಲಿದ್ದರು. ಕೊಡಗಿನಲ್ಲೂ ಸಹಾ ಅವರು ಅಪಾರವಾದ ಕಾರ್ಯ ನಿರ್ವಹಿಸಿದರು. ನವೆಂಬರ್ ೨೦೦೦ದ ವರ್ಷದಿಂದ ಅವರು ಬೆಳಗಾವಿಯ ರಾಮಕೃಷ್ಣಾಶ್ರಮದಲ್ಲಿದ್ದರು. ಅಲ್ಲಿ ಕೂಡಾ ಅವರ ಸಾಧನೆ ಅಮೋಘವಾದದ್ದು. ಕರ್ನಾಟಕದಲ್ಲಿ ಹಲವಾರು ಸತ್ಸಂಗಗಳು, ರಾಮಕೃಷ್ಣ ಆಶ್ರಮಗಳ ಶಾಖೆಗಳ ಪ್ರಾರಂಭಕ್ಕೆ ಅವರು ಮಹತ್ವಪೂರ್ಣ ಕೊಡುಗೆ ನೀಡಿದರು.
ತಮ್ಮ ಪ್ರವಚನಗಳ ಮೂಲಕ ಶ್ರೀರಾಮಕೃಷ್ಣ ಪರಮಹಂಸರು, ಶಾರದಾ ಮಾತೆ ಮತ್ತು ಸ್ವಾಮಿ ವಿವೇಕಾನಂದರ ಕುರಿತು, ಸ್ವಾಮಿ ಪುರುಷೋತ್ತಮಾನಂದರು ಮೂಡಿಸಿದ ಪರಿಣಾಮ ಅಗಾಧವಾದದ್ದು. ಅವರು ನಿರೂಪಿಸಿ ಮತ್ತು ನಂತರ ಪ್ರಕಟಿಸಿದ ವೀರ ಸಂನ್ಯಾಸಿ ವಿವೇಕಾನಂದ, ವಿಶ್ವವಿಜೇತ ವಿವೇಕಾನಂದ, ವಿಶ್ವಮಾನವ ವಿವೇಕಾನಂದ ಈ ಮೂರೂ ಗ್ರಂಥಗಳು ಕನ್ನಡ ಜನತೆಗೆ ಕೊಟ್ಟ ಅಪೂರ್ವ ಕೊಡುಗೆ.
ಈ ಅಪೂರ್ವ ಸಂತ ಸ್ವಾಮಿ ಪುರುಷೋತ್ತಮಾನಂದರು ಫೆಬ್ರುವರಿ ೨೫, ೨೦೦೫ರ ವರ್ಷದಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ತಮ್ಮ ೭೩ನೆಯ ವಯಸ್ಸಿನಲ್ಲಿ ಇಹ ಜೀವನವನ್ನು ತ್ಯಜಿಸಿ ದಿವ್ಯಲೋಕದತ್ತ ಮುಖ ಮಾಡಿದರು.
————————————————
►Please Subscribe to Our Anantha Jeevana Ganga Channel : https://bit.ly/38B6qjQ

Comments

@RaviKumar-tx7zv says:

Om namo narayanaya 🙏🙏🙏

@balakrishna4229 says:

🙏🙏ಹರಿಃ ಓಂ 🙏🙏ಹರೇ ಕೃಷ್ಣ 🙏🙏

@narayangoudru7937 says:

🙏🙏🙏🙏🙏🙏🙏🌹💐

@manjulabelamkar267 says:

Ome Namo Sri Lakshmi Narasimha Narasimhaya Namaha🎉🎉🎉🎉🎉namaste 🎉🎉🎉🎉🎉

@mamathapai4555 says:

Thank you Guruji🙏

@mudrasWithIndira says:

Nanu odidaru adara art ha gothilla sariyagi, sariyagi eega nimma mathu keli nammantha samanyarigu antha Aguvanthe thilisuva pari adbuthavagide👏

@mudrasWithIndira says:

Sadhaneyindane nanage Sadhya agide Sariyada ucchraneinda Sahasranama odalisca👏

@mudrasWithIndira says:

Nanu americadindale Kaluve manassu Nirala ayithu nimma vyakyana keli👏👏👏👏

@mudrasWithIndira says:

👏👏👏👏👏👏

@krishnapoojary1498 says:

Shri Gurave namaha

@alamelushivaswamy5419 says:

xalent . very nice. i am very glad n i had satisfaction.thanks.

@lathabarvathaya1535 says:

🙏🙏🙏

@basavarajshastri8353 says:

ಓಂ ನಮೋ ಭಗವತೆ ವಾಸುದೇವಾಯ 🙏

@mahadevisreenivas2319 says:

Please UPLOAD part 6 it's missing we will be grateful.🙏🙏

@vinayakssulaki2300 says:

Om namo Sri bhagavate Sridhar datta namo namah 🙏🙏🙏🙏🙏🙏

@meenakini3031 says:

🙏🏿🙏🏿🙏🏿🙏🏿👌🏼

@umavathikr8698 says:

🙏🙏🙏🙏🙏🙏🙏🙏🙏🙏🙏🙏

@balakrishna4229 says:

🙏💐🙏

Write a comment

*